| ಭಾಸ್ಕರ (ಕ್ರಿ.ಶ. ೧೪೨೪) | |
| ಸ್ವ-ವಿವರ | |
| ಅನಂತಪುರ ಜಿಲ್ಲೆಯ ಪೆನಗೊಂಡೆ ಇವನ ಊರು ಎಂದು ಪಂಡಿತರ ಅನಿಸಿಕೆ. | |
| ವಿಶ್ವಾಮಿತ್ರ ಗೋತ್ರದ ಬಸವಾಂಕನ ಮಗ, ಜೈನಬ್ರಾಹ್ಮಣ ಕವಿ | |
| ಸಾಹಿತ್ಯಕೃತಿಗಳು : | |
| ಜೀವಂಧರ ಚರಿತೆ -ಇವನು ಭಾಮೀನಿ ಷಟ್ಪದಿಯಲ್ಲಿ ಬರೆದ ಕಾವ್ಯ. | |
| ಇದು ಜೀವಂಧರ ಎಂಬ ರಾಜನ ಕಥೆ. ಸಂಸ್ಕೃತದಲ್ಲಿ ವಾದೀಭಸಿಂಹಸೂರಿ ಬರೆದಿರುವ ಜೀವಂಧರ ಚರಿತ್ರೆಯ ಕನ್ನಡ ಅನುವಾದ. | |
| ನೇಮಿಚಂದ್ರ, ಗುಣವರ್ಮ, ನಾಗವರ್ಮ, ಪೊನ್ನ, ಅಗ್ಗಳ, ಗಜಾಂಕುಶ ಮೊದಲಾದ ಪೂರ್ವ ಕವಿಗಳನ್ನು ತನ್ನ ಕಾವ್ಯದಲ್ಲಿ ಹೊಗಳಿದ್ದಾನೆ. | |
| ಪ್ರಶಸ್ತಿ, ಪುರಸ್ಕಾರ, ಬಿರುದು: | |
| ವಾಣೀವದನದರ್ಪಣ ಎಂಬುದು ಇವನ ಬಿರುದು. | |
| ಕವಿ ಕುರಿತು ಪ್ರಕಟಿತ ಪ್ರಮುಖ ಲೇಖನಗಳು : | |
| ಕವಿ ಸಂದೇಶ : |